25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya
error: Content is protected !!