July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ ಮತ್ತು ಅನ್ನಸಂತರ್ಪಣೆಯು ಜ‌ 14 ರಂದು ನಡೆಯಿತು.

ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕುಂಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅರಮಲೆಬೆಟ್ಟ ಕ್ಷೇತ್ರದ ಅನುಂಶೀಕ ಆಡಳಿತದಾರ ಸುಕೇಶ್ ಕುಮಾರ್ ಕಡಂಬು, ಕುಂಭಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ ಪಾಡ್ಯಾರು, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ವಾತ್ಸಲ್ಯ, ಪ್ರಮುಖರಾದ ಸೀತರಾಮ ಶೆಟ್ಟಿ ವೈಭವ್, ಶಶಿರಾಜ್ ಶೆಟ್ಟಿ, ಸತೀಶ್ ಶೆಟ್ಟಿ ದೊಡ್ಡಮನೆ, ವಿಠಲ ಶೆಟ್ಟಿ, ಪ್ರಿಯಾ ಹೆಗ್ಡೆ,ಗಂಗಾಧರ ಆಚಾರ್ಯ, ಸುಭಾಶ್ಚಂದ್ರ ಜೈನ್, ಚಿದಾನಂದ ಇಡ್ಯ, ಗಣೇಶ್ ಕುಲಾಲ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ ಸಾಯಿರಾಂ, ಮಮತಾ ಎಂ ಶೆಟ್ಟಿ, ದಾಮೋದರ್, ಸುನೀಶ್ ಕುಮಾರ್, ಆನಂದ ಶೆಟ್ಟಿ ವಾತ್ಸಲ್ಯ, ವಿಠಲ, ಅವಿನಾಶ್, ಪ್ರಶಾಂತ್ ಹಾಗೂ ಸಮಿತಿ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

ಶಿಕ್ಷಣ ಧರಣೇಂದ್ರ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಪ್ರಧಾನ ಆರ್ಚಕ ಕೆ ರತ್ನಾಕರ ನೂರಿತ್ತಾಯ ವೈದಿಕ ವಿಧಿ ವಿಧಾನ ನೇರವೇರಿಸಿದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!