April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ ಜೀವನವನ್ನು ಮುಂದಿಟ್ಟುಕೊAಡು ರಚಿಸಲಾದ ಕಲಾಕೃತಿ ‘ಮುದ್ದಣನ ಮನೋರಮೆ’. ಇದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ನಿಡುಗಾಲದ ಯೋಜನೆ. ಇಂತಹದ್ದೊಂದು ಕೃತಿಯ ಕನಸು ಅವರ ತಲೆಹೊಕ್ಕ 2ವರ್ಷದ ಬಳಿಕ ಉಜಿರೆಯ ವನರಂಗ ಬಯಲು ರಂಗಭೂಮಿಯಲ್ಲಿ ನನಸಾಗಿ ನಾಟಕವು ದೃಶ್ಯ ರೂಪಕವಾಗಿ ಮೈದಳೆಯಿತು.


ನಾಟಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಛಾಪು ಮೂಡಿಸಿರುವ ಹೇಮಾವತಿ ಹೆಗ್ಗಡೆಯವರ ಕಲಾತಂಡ ‘ರಂಗಶಿವ’ ಮುದ್ದಣ ನಾಟಕವನ್ನು ಯಶಸ್ವಿಯಾಗಿ ಸಾದರಪಡಿಸಿತು. ರಂಗಶಿವದ ದಶಮಾನೋತ್ಸವ ವರ್ಷದ ‘ಮುದ್ದಣನ ಮನೋರಮೆ’ ನಾಟಕ ಗಂಭೀರ ಮತ್ತು ಆಂತರ್ಯವನ್ನು ಕೆದಕುವ ಪ್ರಯೋಗ. ಎಲ್ಲಿ ಎಡವಟ್ಟಾದರೂ ಕಿರಿಕಿರಿ ಎನಿಸಬಹುದು. ಹೀಗಿದ್ದರೂ ಒಟ್ಟಂದದಲ್ಲಿ ಮುದ್ದಣ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅವರಿಂದ ಸ್ಪಂದನೆ ಪಡೆಯುವಲ್ಲಿ ಸಫಲವಾಯಿತು. ಹೇಮಾವತಿ ವೀ.ಹೆಗ್ಗಡೆಯವರ ಮಹಿಳಾಪರ ಚಿಂತನೆಗಳು ಮತ್ತೊಮ್ಮೆ ಈ ನಾಟಕದಲ್ಲಿಯೂ ವ್ಯಕ್ತಗೊಂಡವು. ಒಟ್ಟಾರೆಯಾಗಿ ಮುದ್ದಣನ ಕಣ್ಣುಗಳಿಂದ ಕಂಡ ರಾಮಾಶ್ವಮೇಧ ನಾಟಕ, ಹೊಸರಂಗ ಪ್ರಯೋಗದ ಸಾಧ್ಯತೆಗಳನ್ನು ಸಮರ್ಥವಾಗಿ ಸಭಿಕರ ಮುಂದೆ ತಂದು ನಿಲ್ಲಿಸಿದ್ದು ಮಾತ್ರವಲ್ಲದೆ ಪ್ರೇಕ್ಷಕರ ಒಪ್ಪುಗೆಯನ್ನೂ ಪಡೆದುಕೊಂಡಿತು.

Related posts

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!