23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.


ಇಂದು (ಜ. 14) ತೋರಣ ಮುಹೂರ್ತ, ಊರವರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ಈ ವೇಳೆ ದೇವಸ್ಥಾನದ 2025 ರ ನೂತನ ಕ್ಯಾಲೆಂಡರ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು, ಅರ್ಚಕ ಯು.ವಿ. ಗುರುಪ್ರಸಾದ್ ನಿಡ್ವಣ್ಣಾಯ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ , ಪವಿತ್ರಪಾಣಿ ಶ್ರೀಧರ ಶಬರಾಯ, ದೇವಪಾಲ ಅಜ್ರಿ ಉಳಿಯಬೀಡು, ಯುವರಾಜ ಜೈನ್ ಉಳಿಯಬೀಡು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ್ಯ ಗೌಡ ಪದಳ, ಕಾರ್ಯದರ್ಶಿ ಆನಂದ ಗೌಡ ಕಲ್ಕುಡಂಗೆ, ಸೇವಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಅಪ್ರೋಡಿ, ಕಾರ್ಯದರ್ಶಿ ಶರತ್ಚಂದ್ರ ಹಿರ್ತಡ್ಕ ಹಾಗೂ ಜಾತ್ರೋತ್ಸವ ಸಮಿತಿ , ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಜೆ ಧ್ವಜಾರೋಹಣ , ರಾತ್ರಿ ನಡೆಯಲಿರುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್ ಆಗಮಿಸಲಿದ್ದಾರೆ.

ಈ ವೇಳೆ ಧರ್ಮಸ್ಥಳ ಕಲ್ಲೇರಿ ಶ್ರೀ ಸಿದ್ಧಿವಿನಾಯಕ ಸ್ಟೋರ್ ಉದ್ಯಮಿಗಳಾದ ರತ್ನಾಕರ ಪ್ರಭು, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ನರೇಂದ್ರ ಕುಮಾರ್ ಉಜಿರೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಪ್ರಸಿದ್ಧ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ಜರಗಲಿದೆ.

Related posts

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya
error: Content is protected !!