26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

ಬೆಳ್ತಂಗಡಿ: 50 ಸಂವತ್ಸರಗಳನ್ನು ಪೂರೈಸಿ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಹೆಮ್ಮೆಯ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ ಬೆಳ್ತಂಗಡಿಯು ತನ್ನ ಸೇವಾ ಚಟುವಟಿಕೆಯ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡು ಮುನ್ನಡೆಯುತ್ತಿದೆ. ಗತಕಾಲದಲ್ಲಿ ಅಳದಂಗಡಿ ಕಂಬಳೋತ್ಸವದ ಮೂಲಕ ಜನಸಾಮಾನ್ಯರ ಮನೆ ಮಾತಾಗಿದ್ದ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಖ್ಯಾತಿಯನ್ನು ಲಯನ್ಸ್ ಯಕ್ಷೋತ್ಸವದ ಮೂಲಕ ನೂತನ ಪಥದತ್ತ ಕೊಂಡೊಯ್ಯುವ ಹೆಜ್ಜೆಯನ್ನಿಟ್ಟಿದೆ.

ಇದೀಗ ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಜ.14 ರಂದು ಲಯನ್ಸ್ ಯಕ್ಷೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದ ವಠಾರದ ಸಭಾಂಗಣದಲ್ಲಿ ನಡೆಯಲಿದೆ.

ಸಂಜೆ 7 ರಿಂದ 12 ರ ವರೆಗೆ ಯಕ್ಷಗಾನ ಪ್ರದರ್ಶನದ ಜೊತೆಗೆ ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ನಡೆಯಲಿದೆ.


ಸನ್ಮಾನ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಾಮಾಜಿಕ ಕಳಕಳಿಯ ಸೇವೆ ಒಂದೆಡೆಯಾದರೆ ಯಕ್ಷಗಾನ ಕ್ಷೇತ್ರದ ಹಿಮ್ಮೆಳ, ಮುಮ್ಮೇಳ ಮತ್ತು ನೇಪಥ್ಯದಲ್ಲಿ15 ವರ್ಷಗಳಿಗೂ ಮಿಗಿಲಾದ ಸಾರ್ಥಕ ಸೇವೆ ಸಲ್ಲಿಸಿದ 10 ಹೆಮ್ಮೆಯ ಕಲಾವಿದರಿಗೆ ಗೌರವಾರ್ಪಣೆಯ ಸನ್ಮಾನ ನಡೆಯಲಿದೆ ಎಂದು ಲಯನ್ಸ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಲ| ಕಿರಣ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಲ| ಅಮಿತಾನಂದ ಹೆಗ್ಡೆ, ಯಕ್ಷ ಸಂಯೋಜಕ ಲ| ಸುರೇಶ್ ಶೆಟ್ಟಿ ಲಾಯಿಲ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ..

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ (ಆಡಮ್ಸ್ ಸ್ಕೂಲ್ ಆಫ್ ಡೆಂಟಿಸ್ಟ್ರಿ) ದಂತ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!