37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ನಡೆಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ ಸದಾ ಇರಲೆಂದು ಶುಭ ಹಾರೈಸಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.


ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸೀತಾರಾಮ್ ಭಟ್, ಡಾ. ಆದಿತ್ಯರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂಧಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು

Related posts

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
error: Content is protected !!