July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

ಉಜಿರೆ: ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಜ.14 ರಂದು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರಾಜಶೇಖರ ಹಳ್ಳಿ ಮನೆ ದೀಪವನ್ನು ಬೆಳಗಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸೂರ್ಯನು ತನ್ನನ್ನು ತಾನು ಅವಲೋಕ ಮಾಡಿಕೊಳ್ಳುವ ಕಾಲವಿದು . ಸೂರ್ಯ ಯಾರಿಗೂ ಮೋಸ ಮಾಡುವುದಿಲ್ಲ ಎಲ್ಲರಿಗೂ ಒಂದೇ ರೀತಿಯ ಶಾಖವನ್ನು ಕೊಡುತ್ತಾನೆ. ಈ ಕಾರಣಕ್ಕೆ ಜಗತ್ತಿನ ವಿಜ್ಞಾನಿಗಳು ಸೂರ್ಯನಿಗೆ ಕೈ ಮುಗಿಯುತ್ತಾರೆ. ಮನುಷ್ಯನು ಕೂಡ ಈ ಸಮಯದಲ್ಲಿ ಅವಲೋಕನ ಮಾಡಿಕೊಳ್ಳಬೇಕಾದ ಸಂಧರ್ಭ ಇದು. ಸಂಕ್ರಮಣ ಎಂದರೆ ಬದಲಾವಣೆ ಕಾಲ .ದಕ್ಷಿಣಾಯಣದಿಂದ ಉತ್ತರಾಯಣ ಕಾಲದಲ್ಲಿ ಸೂರ್ಯ ಹೆಚ್ಚು ಪ್ರಕಾಶಮಾನವಾಗಿ ಹೊಳೆಯುತ್ತಾನೆ.ಈ ಪ್ರಕಾಶವನ್ನುನೀರು ಹೀರಿಕೊಳ್ಳುತ್ತದೆ . ಆದ್ದರಿಂದ ಈ ದಿನ ಸಮುದ್ರ , ಹೊಳೆಗಳಿಗೆ ತೆರಳಿ ಸ್ನಾನ ಮಾಡಿದರೆ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನದಂದು ಎಳ್ಳಿನ ಎಣ್ಣೆಯನ್ನು ಹಚ್ಚಿ ಸ್ನಾನ ಮಾಡಿದರೆ ಚರ್ಮರೋಗಗಳು ವಾಸಿಯಾಗುತ್ತದೆ . ಚರ್ಮದ ಒಣಗುವಿಕೆಯನ್ನು ತಡೆಯಲು
ಎಳ್ಳು, ಕಡಲೆ ,ಬೆಲ್ಲ ,ಸಜ್ಜೆ ಸೇವನೆಯಿಂದ ನಮ್ಮ ದೇಹ ಸದೃಢವಾಗಿರುತ್ತದೆ . ಹಾಗು ಹೆಚ್ಚು ಪ್ರೋಟೀನ್ ದೊರಕುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜರವರು ವಹಿಸಿ ಎಳ್ಳು ಬೆಲ್ಲ ತಿಂದು ನಾಲ್ಕು ಒಳ್ಳೆಯ ಮಾತಾಡು ಎನ್ನುವ ಗಾದೆ ಮಾತಿನೊಂದಿಗೆ ಸಂಕ್ರಾಂತಿಯ ವಿಶೇಷತೆಯನ್ನು ತಿಳಿಸಿದರು.


ವಿದ್ಯಾರ್ಥಿ ನಿಶಿತ್ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ ಯಶವಂತ ಸ್ವಾಗತಿಸಿದರು. ನಿಶಿತ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸುಮಂತ್ ನೆರವೇರಿಸಿದರು . ವೇದಿಕೆಯಲ್ಲಿ ರತ್ನ ಮಾನಸ ಸಿಬ್ಬಂದಿಗಳಾದ ರವಿಚಂದ್ರ, ಉದಯಾರಾಜ್ , ದೀಪಕ್ ಉಪಸ್ಥಿತರಿದ್ದರು .

Related posts

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!