23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ

Suddi Udaya
error: Content is protected !!