July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ


ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾದ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಎನ್ ಎಸ್ ಎಸ್ ವಿದ್ಯಾರ್ಥಿಗಳ ಸೃಜನಶೀಲತೆ, ನಾಯಕತ್ವ, ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದರು.

ಅತಿಥಿಗಳಾದ ನಡ ಗ್ರಾಮ ಪಂಚಾಯತ್ ನ ಸದಸ್ಯ ಪ್ರವೀಣ್ ವಿ ಜಿ ಮಾತನಾಡತ್ತಾ, ಆಧುನಿಕ ಕಾಲದಲ್ಲಿ ಅತಿಯಾದ ತಂತ್ರಜ್ಞಾನದ ಬಳಕೆಯಿಂದ ಯುವ ಜನಾಂಗ ದಾರಿ ತಪ್ಪುತ್ತಿದೆ. ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಪಡೆಯುವುದರೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಘಟಕ ನಾಯಕ ಅಶ್ವಥ್ ಉಪಸ್ಥಿತರಿದ್ದರು.


ಘಟಕ ನಾಯಕಿ ಅನುಕ್ಷಾ ಸ್ವಾಗತಿಸಿದರು . ಎನ್ ಎಸ್ ಎಸ್ ಕಾರ್ಯಕ್ರಮ ಆಧಿಕಾರಿ ಶಂಕರ್ ರಾವ್ ಧನ್ಯವಾದವಿತ್ತರು. ಕು ಜೀವನ್ಯ ನಿರೂಪಿಸಿದರು.

Related posts

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya
error: Content is protected !!