23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ ಜೀವನವನ್ನು ಮುಂದಿಟ್ಟುಕೊAಡು ರಚಿಸಲಾದ ಕಲಾಕೃತಿ ‘ಮುದ್ದಣನ ಮನೋರಮೆ’. ಇದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ನಿಡುಗಾಲದ ಯೋಜನೆ. ಇಂತಹದ್ದೊಂದು ಕೃತಿಯ ಕನಸು ಅವರ ತಲೆಹೊಕ್ಕ 2ವರ್ಷದ ಬಳಿಕ ಉಜಿರೆಯ ವನರಂಗ ಬಯಲು ರಂಗಭೂಮಿಯಲ್ಲಿ ನನಸಾಗಿ ನಾಟಕವು ದೃಶ್ಯ ರೂಪಕವಾಗಿ ಮೈದಳೆಯಿತು.


ನಾಟಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಛಾಪು ಮೂಡಿಸಿರುವ ಹೇಮಾವತಿ ಹೆಗ್ಗಡೆಯವರ ಕಲಾತಂಡ ‘ರಂಗಶಿವ’ ಮುದ್ದಣ ನಾಟಕವನ್ನು ಯಶಸ್ವಿಯಾಗಿ ಸಾದರಪಡಿಸಿತು. ರಂಗಶಿವದ ದಶಮಾನೋತ್ಸವ ವರ್ಷದ ‘ಮುದ್ದಣನ ಮನೋರಮೆ’ ನಾಟಕ ಗಂಭೀರ ಮತ್ತು ಆಂತರ್ಯವನ್ನು ಕೆದಕುವ ಪ್ರಯೋಗ. ಎಲ್ಲಿ ಎಡವಟ್ಟಾದರೂ ಕಿರಿಕಿರಿ ಎನಿಸಬಹುದು. ಹೀಗಿದ್ದರೂ ಒಟ್ಟಂದದಲ್ಲಿ ಮುದ್ದಣ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅವರಿಂದ ಸ್ಪಂದನೆ ಪಡೆಯುವಲ್ಲಿ ಸಫಲವಾಯಿತು. ಹೇಮಾವತಿ ವೀ.ಹೆಗ್ಗಡೆಯವರ ಮಹಿಳಾಪರ ಚಿಂತನೆಗಳು ಮತ್ತೊಮ್ಮೆ ಈ ನಾಟಕದಲ್ಲಿಯೂ ವ್ಯಕ್ತಗೊಂಡವು. ಒಟ್ಟಾರೆಯಾಗಿ ಮುದ್ದಣನ ಕಣ್ಣುಗಳಿಂದ ಕಂಡ ರಾಮಾಶ್ವಮೇಧ ನಾಟಕ, ಹೊಸರಂಗ ಪ್ರಯೋಗದ ಸಾಧ್ಯತೆಗಳನ್ನು ಸಮರ್ಥವಾಗಿ ಸಭಿಕರ ಮುಂದೆ ತಂದು ನಿಲ್ಲಿಸಿದ್ದು ಮಾತ್ರವಲ್ಲದೆ ಪ್ರೇಕ್ಷಕರ ಒಪ್ಪುಗೆಯನ್ನೂ ಪಡೆದುಕೊಂಡಿತು.

Related posts

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!