ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ ಜೀವನವನ್ನು ಮುಂದಿಟ್ಟುಕೊAಡು ರಚಿಸಲಾದ ಕಲಾಕೃತಿ ‘ಮುದ್ದಣನ ಮನೋರಮೆ’. ಇದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ನಿಡುಗಾಲದ ಯೋಜನೆ. ಇಂತಹದ್ದೊಂದು ಕೃತಿಯ ಕನಸು ಅವರ ತಲೆಹೊಕ್ಕ 2ವರ್ಷದ ಬಳಿಕ ಉಜಿರೆಯ ವನರಂಗ ಬಯಲು ರಂಗಭೂಮಿಯಲ್ಲಿ ನನಸಾಗಿ ನಾಟಕವು ದೃಶ್ಯ ರೂಪಕವಾಗಿ ಮೈದಳೆಯಿತು.


ನಾಟಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಛಾಪು ಮೂಡಿಸಿರುವ ಹೇಮಾವತಿ ಹೆಗ್ಗಡೆಯವರ ಕಲಾತಂಡ ‘ರಂಗಶಿವ’ ಮುದ್ದಣ ನಾಟಕವನ್ನು ಯಶಸ್ವಿಯಾಗಿ ಸಾದರಪಡಿಸಿತು. ರಂಗಶಿವದ ದಶಮಾನೋತ್ಸವ ವರ್ಷದ ‘ಮುದ್ದಣನ ಮನೋರಮೆ’ ನಾಟಕ ಗಂಭೀರ ಮತ್ತು ಆಂತರ್ಯವನ್ನು ಕೆದಕುವ ಪ್ರಯೋಗ. ಎಲ್ಲಿ ಎಡವಟ್ಟಾದರೂ ಕಿರಿಕಿರಿ ಎನಿಸಬಹುದು. ಹೀಗಿದ್ದರೂ ಒಟ್ಟಂದದಲ್ಲಿ ಮುದ್ದಣ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅವರಿಂದ ಸ್ಪಂದನೆ ಪಡೆಯುವಲ್ಲಿ ಸಫಲವಾಯಿತು. ಹೇಮಾವತಿ ವೀ.ಹೆಗ್ಗಡೆಯವರ ಮಹಿಳಾಪರ ಚಿಂತನೆಗಳು ಮತ್ತೊಮ್ಮೆ ಈ ನಾಟಕದಲ್ಲಿಯೂ ವ್ಯಕ್ತಗೊಂಡವು. ಒಟ್ಟಾರೆಯಾಗಿ ಮುದ್ದಣನ ಕಣ್ಣುಗಳಿಂದ ಕಂಡ ರಾಮಾಶ್ವಮೇಧ ನಾಟಕ, ಹೊಸರಂಗ ಪ್ರಯೋಗದ ಸಾಧ್ಯತೆಗಳನ್ನು ಸಮರ್ಥವಾಗಿ ಸಭಿಕರ ಮುಂದೆ ತಂದು ನಿಲ್ಲಿಸಿದ್ದು ಮಾತ್ರವಲ್ಲದೆ ಪ್ರೇಕ್ಷಕರ ಒಪ್ಪುಗೆಯನ್ನೂ ಪಡೆದುಕೊಂಡಿತು.

Related posts

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ವಿ.ಪ. ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya
error: Content is protected !!