September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

ಉಜಿರೆ: ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಜ.14 ರಂದು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರಾಜಶೇಖರ ಹಳ್ಳಿ ಮನೆ ದೀಪವನ್ನು ಬೆಳಗಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸೂರ್ಯನು ತನ್ನನ್ನು ತಾನು ಅವಲೋಕ ಮಾಡಿಕೊಳ್ಳುವ ಕಾಲವಿದು . ಸೂರ್ಯ ಯಾರಿಗೂ ಮೋಸ ಮಾಡುವುದಿಲ್ಲ ಎಲ್ಲರಿಗೂ ಒಂದೇ ರೀತಿಯ ಶಾಖವನ್ನು ಕೊಡುತ್ತಾನೆ. ಈ ಕಾರಣಕ್ಕೆ ಜಗತ್ತಿನ ವಿಜ್ಞಾನಿಗಳು ಸೂರ್ಯನಿಗೆ ಕೈ ಮುಗಿಯುತ್ತಾರೆ. ಮನುಷ್ಯನು ಕೂಡ ಈ ಸಮಯದಲ್ಲಿ ಅವಲೋಕನ ಮಾಡಿಕೊಳ್ಳಬೇಕಾದ ಸಂಧರ್ಭ ಇದು. ಸಂಕ್ರಮಣ ಎಂದರೆ ಬದಲಾವಣೆ ಕಾಲ .ದಕ್ಷಿಣಾಯಣದಿಂದ ಉತ್ತರಾಯಣ ಕಾಲದಲ್ಲಿ ಸೂರ್ಯ ಹೆಚ್ಚು ಪ್ರಕಾಶಮಾನವಾಗಿ ಹೊಳೆಯುತ್ತಾನೆ.ಈ ಪ್ರಕಾಶವನ್ನುನೀರು ಹೀರಿಕೊಳ್ಳುತ್ತದೆ . ಆದ್ದರಿಂದ ಈ ದಿನ ಸಮುದ್ರ , ಹೊಳೆಗಳಿಗೆ ತೆರಳಿ ಸ್ನಾನ ಮಾಡಿದರೆ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನದಂದು ಎಳ್ಳಿನ ಎಣ್ಣೆಯನ್ನು ಹಚ್ಚಿ ಸ್ನಾನ ಮಾಡಿದರೆ ಚರ್ಮರೋಗಗಳು ವಾಸಿಯಾಗುತ್ತದೆ . ಚರ್ಮದ ಒಣಗುವಿಕೆಯನ್ನು ತಡೆಯಲು
ಎಳ್ಳು, ಕಡಲೆ ,ಬೆಲ್ಲ ,ಸಜ್ಜೆ ಸೇವನೆಯಿಂದ ನಮ್ಮ ದೇಹ ಸದೃಢವಾಗಿರುತ್ತದೆ . ಹಾಗು ಹೆಚ್ಚು ಪ್ರೋಟೀನ್ ದೊರಕುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜರವರು ವಹಿಸಿ ಎಳ್ಳು ಬೆಲ್ಲ ತಿಂದು ನಾಲ್ಕು ಒಳ್ಳೆಯ ಮಾತಾಡು ಎನ್ನುವ ಗಾದೆ ಮಾತಿನೊಂದಿಗೆ ಸಂಕ್ರಾಂತಿಯ ವಿಶೇಷತೆಯನ್ನು ತಿಳಿಸಿದರು.


ವಿದ್ಯಾರ್ಥಿ ನಿಶಿತ್ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ ಯಶವಂತ ಸ್ವಾಗತಿಸಿದರು. ನಿಶಿತ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸುಮಂತ್ ನೆರವೇರಿಸಿದರು . ವೇದಿಕೆಯಲ್ಲಿ ರತ್ನ ಮಾನಸ ಸಿಬ್ಬಂದಿಗಳಾದ ರವಿಚಂದ್ರ, ಉದಯಾರಾಜ್ , ದೀಪಕ್ ಉಪಸ್ಥಿತರಿದ್ದರು .

Related posts

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya
error: Content is protected !!