April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

ಉಜಿರೆ:  ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಮಣ  ಶುಭದಿನ ಜ. 14 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ  ಚಾಲನೆ ನೀಡಲಾಯಿತು. 

ಮುಂಜಾನೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ರ  ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳ ಮತ್ತು ರಾಮಚಂದ್ರ ಹೊಳ್ಳರು  ಪ್ರಾರ್ಥಿಸಿ  ಶುಭಾರಂಭಗೊಳಿಸಿದರು.  ಶಮನ ಕ್ಲಿನಿಕ್ ನ  ಚಕ್ರಪಾಣಿ ಸರಳಾಯರ ಪ್ರಾಯೋಜಕತ್ವದಲ್ಲಿ  ನಡೆಸಲ್ಪಡುವ  ಉಡುಪಿಯ  ಮದ್ವೇಶ ಆಚಾರ್ಯ  ಮಠದ   ಅವರ “ಭಾಗವತ ಪಾತ್ರ ಪ್ರಪಂಚ-ನೀತಿ ಕಥೆಗಳು” ಪ್ರವಚನ ಸಪ್ತಾಹಕ್ಕೆ  ಶರತ್ ಕೃಷ್ಣ ಪಡುವೆಟ್ನಾಯರು   ದೀಪ ಪ್ರಜ್ವಲಿಸಿ ಚಾಲನೆ ನೀಡಿ ,ಸ್ವಾಗತಿಸಿ  ಕ್ಷೇತ್ರದ   ವತಿಯಿಂದ  ಧಾರ್ಮಿಕ ಜ್ಞಾನ ಪ್ರಸಾರಕ್ಕೆ ವಿಶೇಷ ಆದ್ಯತೆ ನೀಡುತ್ತಾ  ಬರುತ್ತಿದ್ದು , ಉತ್ಸವ ಕಾಲದಲ್ಲಿ  ಪುರಾಣ ಪ್ರವಚನ ಸಪ್ತಾಹ   ನಡೆಸಲು  ಯೋಜಿಸಿದ್ದೇವೆ.  ಭಗವದ್ಭಕ್ತರು  ಜ್ಞಾನ ಸತ್ರದಲ್ಲಿ  ಭಾಗವಹಿಸಿ  ಪುಣ್ಯಭಾಜನರಾಗಬೇಕೆಂದರು.                                               

ಪ್ರವಚನಕಾರ ಮದ್ವೇಶ  ಆಚಾರ್ಯ ಮಠದ ಅವರು ಉಜಿರೆ ಕ್ಷೇತ್ರ ಜ್ಞಾನಕ್ಕೆ ಪ್ರಾಧಾನ್ಯತೆ ನೀಡುತ್ತಿದ್ದು ಹರಿವಾಯು ಪ್ರೇರಣೆಯಂತೆ  ಭಾಗವತ ಪಾತ್ರಗಳ ವಿಶೇಷತೆಯನ್ನು   ತಿಳಿಸಲು ಬಯಸುತ್ತೇವೆ. ಉಚ್ಚಭೂತಿಯೆಂದರೆ ಹೇರಳ ಸಂಪತ್ತು ಇದ್ದ ಜಾಗ ಎಂದರ್ಥ.  ಇಲ್ಲಿ   ಘನ ವಿದ್ವಾಂಸರು  ನೆಲೆಯಾಗಿದ್ದು  ಮಧ್ವಾಚಾರ್ಯರ ಜ್ಞಾನವನ್ನು ಪರೀಕ್ಷಿಸಿ ಅವರಲ್ಲಿ ದೋಷ ಹುಡುಕುವ ಪ್ರಯತ್ನ ಮಾಡಿ ಸೋತರು. ಮಧ್ವಾಚಾರ್ಯರು  ತನ್ನ 37 ಗ್ರಂಥಗಳ ಪೈಕಿ  ಇಲ್ಲೇ “ಕರ್ಮ ನಿರ್ಣಯ”ಗ್ರಂಥ  ರಚಿಸಿ ದೇವರಿಗೆ ಸಮರ್ಪಿಸಿದ ಜಾಗ  ಉಜೇರ್ಯ ಮುಂದೆ ಉಜಿರೆ ಹೆಸರಿನಿಂದ ಪ್ರಸಿದ್ಧಿ ಪಡೆಯಿತು. ಉತ್ಸವ ಕಾಲದಲ್ಲಿ ದೇವರು ಸಂತುಷ್ಟನಾಗಿ  ಭಕ್ತರನ್ನು ಅನುಗ್ರಹಿಸುವ ಪರ್ವ ಕಾಲ.  18  ಸಹಸ್ರ ಸ್ತೋತ್ರಗಳನ್ನೊಳಗೊಂಡ   ಭಾಗವತ  ಪುರಾಣದ ಪಾತ್ರಗಳನ್ನು  ಸಾದರಪಡಿಸಲು ಪ್ರಯತ್ನಿಸಲಾಗುವುದು. ಜ 2೦ರವರೆಗೆ ಪ್ರತಿದಿನ ಬೆಳಿಗ್ಗೆ 9.3೦ರಿಂದ 12 ರವರೆಗೆ  ಪ್ರವಚನ ನಡೆಯಲಿದೆ  ಎಂದರು.                                                 

ಪ್ರವಚನ ಸತ್ರದ ಪ್ರಾಯೋಜಕರಾದ ಶ್ರೀಮತಿ ಶಾರದಾ ಮತ್ತು ಚಕ್ರಪಾಣಿ ಸರಳಾಯ,   ದ ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ!ಎಂ ಪಿ ಶ್ರೀನಾಥ್, ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್  ಮೊದಲಾದವರು ಉಪಸ್ಥಿತರಿದ್ದರು.                                                                       

ಇದೆ ಸಂದರ್ಭದಲ್ಲಿ  ಧರ್ಮಸ್ಥಳದ ಕಮಲಾಕ್ಷ ಗುಡಿಗಾರ್ ಸಾಹಿತ್ಯ ಮತ್ತು ಸಂಗೀತ ನೀಡಿ   ಕೇಶವ ದೇವಾಂಗ  ಬನಶಂಕರಿ  ಅವರು  ಹಾಡಿರುವ   “ಶ್ರೀ ಲಕ್ಷ್ಮಿ ಜನಾರ್ದನ” ಕನ್ನಡ ಭಕ್ತಿ ಗೀತೆಗಳನ್ನು  ಶರತ್ ಕೃಷ್ಣ ಪಡುವೆಟ್ನಾಯರು ಬಿಡುಗಡೆಗೊಳಿಸಿ ಶುಭ ಕೋರಿದರು.                                     

ಧ್ವಜಾರೋಹಣ ಹಾಗು ಭಂಡಾರ ಏರುವುದರೊಂದಿಗೆ  ವರ್ಷಾವಧಿ ಜಾತ್ರೆಗೆ ಸಂಭ್ರಮದ ಚಾಲನೆ ದೊರೆಯಿತು.ಜ 23 ರವರೆಗೆ  ವಿವಿಧ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆಯಲಿವೆ.

Related posts

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!