23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

Suddi Udaya
error: Content is protected !!