April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ. ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಗುಳಿ ನಾರಾಯಣ ಭಟ್, ಉಪಾಧ್ಯಕ್ಷರಾಗಿ ವಡಿವೇಲು

Suddi Udaya
error: Content is protected !!