25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya
error: Content is protected !!