23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

ಮೊಗ್ರು : ಮೊಗ್ರು ಗ್ರಾಮ ಮುಗೇರಡ್ಕ ಮೂವರು ದೈವಗಳ ದೈವಸ್ಥಾನಕ್ಕೆ ನೂತನ ಹುಲಿ ಬಂಡಿ ಮತ್ತು ವಳಾಲು ಶ್ರೀ ಕ್ಷೇತ್ರ ಪಡ್ಪು ದೈವಸ್ಥಾನದ ಗ್ರಾಮ ದೈವಗಳಾದ ಶಿರಾಡಿ ರಾಜನ್ ದೈವದ ನೂತನ ಹುಲಿ ಬಂಡಿ ಮತ್ತು ಪಲ್ಲಕ್ಕಿಯ ಪುರಪ್ರವೇಶ ಪ್ರಯುಕ್ತ ಪೆರ್ಲ – ಬೈಪಾಡಿಯಿoದ ಚಾಲನೆಗೊಂಡು, ಶಿವಾಜಿ ಸರ್ಕಲ್ ಶಿವನಗರ – ಕಲ್ಲಮಾಡ – ಊoತನಾಜೆ- ಅಲೆಕ್ಕಿ ಮಾರ್ಗವಾಗಿ ಮುಗೇರಡ್ಕ – ವಳಾಲು ಪಡ್ಪು ಕಡೆಗೆ ಚೆಂಡೆ, ಟಾಸೆ ವಾದ್ಯ, ಸಿಡಿಮದ್ದು ಘೋಷ ವಾಕ್ಯಗಳೊಂದಿಗೆ ಕೇಸರಿ ಧ್ವಜ ರಾರಾಜಿಸುತ್ತ ಜಾಥಾ ಸಾಗಿತು.

ಯುವ ಉದ್ಯಮಿಗಳಾದ ಕಿರಣ್ ಚಂದ್ರ. ಡಿ.ಪುಷ್ಪಗಿರಿ ಇವರು ವಾಹನ ಜಾಥಾಕ್ಕೆ ಚಾಲನೆ ನೀಡಿದರು.


ಮುಗೇರಡ್ಕ ದೈವಸ್ಥಾನದಲ್ಲಿ ಸಭಾ ಕಾರ್ಯಕ್ರಮ ನೆರವೇರಿತು, ಶಿರಾಡಿ ದೈವ ಹಿನ್ನಲೆ ಮತ್ತು ಹುಟ್ಟುಕತೆಯ ಬಗ್ಗೆ ಶಶಾಂಕ್ ಶಂಕರ್ ನೆಲ್ಲಿತ್ತಾಯ ತಿಳಿಸಿದರು. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ಆಡಳಿತ ಮೊಕ್ತೇಸರರಾದ ರಾಮಣ್ಣ ಗೌಡ ದೇವಸ್ಯಗುತ್ತು ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ, ಶ್ರೀ ಕ್ಷೇತ್ರ ವಳಾಲು ಪಡ್ಪು ದೈವಸ್ಥಾನದ ದಾಮೋದರ ಗೌಡ ಶೇಡಿಗುತ್ತು ಪಡ್ಪು , ಬಾರಿಕೆ ರಾಜೇಶ್ ಜೈನ್ ಪಡ್ಪು, ವಸಂತ ಪಿಜಕ್ಕಳ , ವಿಶ್ವನಾಥ ಪೇರಣ ಹಾಗೂ ಮೊಗ್ರು, ಬಜತ್ತೂರು,ಬಂದಾರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಕಾಷ್ಟ ಶಿಲ್ಪಿಗಳಾದ ಬೆಳಾಲು ಶಶಿಧರ್ ಆಚಾರ್ಯ ಮತ್ತು ವಸಂತ ಆಚಾರ್ಯ ಸಹೋದರರಿಗೆ ಗೌರವಾರ್ಪಣೆ ನಡೆಯಿತು.


ಶಿವಾಜಿ ಸರ್ಕಲ್ ಬಳಿ ಶಿವಾಜಿ ಫ್ರೆಂಡ್ಸ್ ವತಿಯಿಂದ ಮಾಲಾರ್ಪನೆ, ಊoತನಾಜೆ, ಅಲೆಕ್ಕಿಯಲ್ಲಿ ಪುಷ್ಪಾರ್ಚನೆ ಹಾಗೂ ಸಿಹಿತಿಂಡಿ ವಿತರಣೆ, ಮುಗೇರಡ್ಕ ಹಾಗೂ ಪಡ್ಪು ಭೋಜನ ವ್ಯವಸ್ಥೆ ನಡೆಸಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಜಾಥಾದಲ್ಲಿ ಭಾಗವಹಿಸಿದ್ದರು.


ಮನೋಹರ ಗೌಡ ಅಂತರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಳಾಲು ವಸಂತ ಗೌಡ ಪಿಜಕ್ಕಳ ಧನ್ಯವಾದ ಸಲ್ಲಿಸಿ,
ಮೊಗ್ರು ಸ.ಕಿ.ಪ್ರಾ. ಶಾಲಾ ಶಿಕ್ಷಕರಾದ ಮಾಧವ ಗೌಡ ಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!