22.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ


ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾದ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ರಾಷ್ಟ್ರ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಎನ್ ಎಸ್ ಎಸ್ ವಿದ್ಯಾರ್ಥಿಗಳ ಸೃಜನಶೀಲತೆ, ನಾಯಕತ್ವ, ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದರು.

ಅತಿಥಿಗಳಾದ ನಡ ಗ್ರಾಮ ಪಂಚಾಯತ್ ನ ಸದಸ್ಯ ಪ್ರವೀಣ್ ವಿ ಜಿ ಮಾತನಾಡತ್ತಾ, ಆಧುನಿಕ ಕಾಲದಲ್ಲಿ ಅತಿಯಾದ ತಂತ್ರಜ್ಞಾನದ ಬಳಕೆಯಿಂದ ಯುವ ಜನಾಂಗ ದಾರಿ ತಪ್ಪುತ್ತಿದೆ. ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಮತ್ತು ಶಿಕ್ಷಣವನ್ನು ಪಡೆಯುವುದರೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್, ಘಟಕ ನಾಯಕ ಅಶ್ವಥ್ ಉಪಸ್ಥಿತರಿದ್ದರು.


ಘಟಕ ನಾಯಕಿ ಅನುಕ್ಷಾ ಸ್ವಾಗತಿಸಿದರು . ಎನ್ ಎಸ್ ಎಸ್ ಕಾರ್ಯಕ್ರಮ ಆಧಿಕಾರಿ ಶಂಕರ್ ರಾವ್ ಧನ್ಯವಾದವಿತ್ತರು. ಕು ಜೀವನ್ಯ ನಿರೂಪಿಸಿದರು.

Related posts

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya
error: Content is protected !!