March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ ಜೀವನವನ್ನು ಮುಂದಿಟ್ಟುಕೊAಡು ರಚಿಸಲಾದ ಕಲಾಕೃತಿ ‘ಮುದ್ದಣನ ಮನೋರಮೆ’. ಇದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ನಿಡುಗಾಲದ ಯೋಜನೆ. ಇಂತಹದ್ದೊಂದು ಕೃತಿಯ ಕನಸು ಅವರ ತಲೆಹೊಕ್ಕ 2ವರ್ಷದ ಬಳಿಕ ಉಜಿರೆಯ ವನರಂಗ ಬಯಲು ರಂಗಭೂಮಿಯಲ್ಲಿ ನನಸಾಗಿ ನಾಟಕವು ದೃಶ್ಯ ರೂಪಕವಾಗಿ ಮೈದಳೆಯಿತು.


ನಾಟಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಛಾಪು ಮೂಡಿಸಿರುವ ಹೇಮಾವತಿ ಹೆಗ್ಗಡೆಯವರ ಕಲಾತಂಡ ‘ರಂಗಶಿವ’ ಮುದ್ದಣ ನಾಟಕವನ್ನು ಯಶಸ್ವಿಯಾಗಿ ಸಾದರಪಡಿಸಿತು. ರಂಗಶಿವದ ದಶಮಾನೋತ್ಸವ ವರ್ಷದ ‘ಮುದ್ದಣನ ಮನೋರಮೆ’ ನಾಟಕ ಗಂಭೀರ ಮತ್ತು ಆಂತರ್ಯವನ್ನು ಕೆದಕುವ ಪ್ರಯೋಗ. ಎಲ್ಲಿ ಎಡವಟ್ಟಾದರೂ ಕಿರಿಕಿರಿ ಎನಿಸಬಹುದು. ಹೀಗಿದ್ದರೂ ಒಟ್ಟಂದದಲ್ಲಿ ಮುದ್ದಣ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅವರಿಂದ ಸ್ಪಂದನೆ ಪಡೆಯುವಲ್ಲಿ ಸಫಲವಾಯಿತು. ಹೇಮಾವತಿ ವೀ.ಹೆಗ್ಗಡೆಯವರ ಮಹಿಳಾಪರ ಚಿಂತನೆಗಳು ಮತ್ತೊಮ್ಮೆ ಈ ನಾಟಕದಲ್ಲಿಯೂ ವ್ಯಕ್ತಗೊಂಡವು. ಒಟ್ಟಾರೆಯಾಗಿ ಮುದ್ದಣನ ಕಣ್ಣುಗಳಿಂದ ಕಂಡ ರಾಮಾಶ್ವಮೇಧ ನಾಟಕ, ಹೊಸರಂಗ ಪ್ರಯೋಗದ ಸಾಧ್ಯತೆಗಳನ್ನು ಸಮರ್ಥವಾಗಿ ಸಭಿಕರ ಮುಂದೆ ತಂದು ನಿಲ್ಲಿಸಿದ್ದು ಮಾತ್ರವಲ್ಲದೆ ಪ್ರೇಕ್ಷಕರ ಒಪ್ಪುಗೆಯನ್ನೂ ಪಡೆದುಕೊಂಡಿತು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!