July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ ಜೀವನವನ್ನು ಮುಂದಿಟ್ಟುಕೊAಡು ರಚಿಸಲಾದ ಕಲಾಕೃತಿ ‘ಮುದ್ದಣನ ಮನೋರಮೆ’. ಇದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ನಿಡುಗಾಲದ ಯೋಜನೆ. ಇಂತಹದ್ದೊಂದು ಕೃತಿಯ ಕನಸು ಅವರ ತಲೆಹೊಕ್ಕ 2ವರ್ಷದ ಬಳಿಕ ಉಜಿರೆಯ ವನರಂಗ ಬಯಲು ರಂಗಭೂಮಿಯಲ್ಲಿ ನನಸಾಗಿ ನಾಟಕವು ದೃಶ್ಯ ರೂಪಕವಾಗಿ ಮೈದಳೆಯಿತು.


ನಾಟಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಛಾಪು ಮೂಡಿಸಿರುವ ಹೇಮಾವತಿ ಹೆಗ್ಗಡೆಯವರ ಕಲಾತಂಡ ‘ರಂಗಶಿವ’ ಮುದ್ದಣ ನಾಟಕವನ್ನು ಯಶಸ್ವಿಯಾಗಿ ಸಾದರಪಡಿಸಿತು. ರಂಗಶಿವದ ದಶಮಾನೋತ್ಸವ ವರ್ಷದ ‘ಮುದ್ದಣನ ಮನೋರಮೆ’ ನಾಟಕ ಗಂಭೀರ ಮತ್ತು ಆಂತರ್ಯವನ್ನು ಕೆದಕುವ ಪ್ರಯೋಗ. ಎಲ್ಲಿ ಎಡವಟ್ಟಾದರೂ ಕಿರಿಕಿರಿ ಎನಿಸಬಹುದು. ಹೀಗಿದ್ದರೂ ಒಟ್ಟಂದದಲ್ಲಿ ಮುದ್ದಣ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅವರಿಂದ ಸ್ಪಂದನೆ ಪಡೆಯುವಲ್ಲಿ ಸಫಲವಾಯಿತು. ಹೇಮಾವತಿ ವೀ.ಹೆಗ್ಗಡೆಯವರ ಮಹಿಳಾಪರ ಚಿಂತನೆಗಳು ಮತ್ತೊಮ್ಮೆ ಈ ನಾಟಕದಲ್ಲಿಯೂ ವ್ಯಕ್ತಗೊಂಡವು. ಒಟ್ಟಾರೆಯಾಗಿ ಮುದ್ದಣನ ಕಣ್ಣುಗಳಿಂದ ಕಂಡ ರಾಮಾಶ್ವಮೇಧ ನಾಟಕ, ಹೊಸರಂಗ ಪ್ರಯೋಗದ ಸಾಧ್ಯತೆಗಳನ್ನು ಸಮರ್ಥವಾಗಿ ಸಭಿಕರ ಮುಂದೆ ತಂದು ನಿಲ್ಲಿಸಿದ್ದು ಮಾತ್ರವಲ್ಲದೆ ಪ್ರೇಕ್ಷಕರ ಒಪ್ಪುಗೆಯನ್ನೂ ಪಡೆದುಕೊಂಡಿತು.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!