ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

ಮುದ್ದಣ ಕವಿ ಪೌರಾಣಿಕ ಕಥಾನಕಗಳನ್ನು ಭಾವನಾತ್ಮಕ ದೃಷ್ಟಿಯಿಂದ ನೋಡಿ ನಾಟಕಗಳನ್ನು ಮತ್ತು ಯಕ್ಷಗಾನಗಳನ್ನು ರಚಿಸಿದವರು. ಅವರು ಬದುಕಿದ್ದು ಕೇವಲ 31 ವರ್ಷಗಳಾದರೂ ಅವರು ಬಿಟ್ಟುಹೋದ ಸಾಹಿತ್ಯ ಸಂಪತ್ತು ಅವರನ್ನು ಅಮರರನ್ನಾಗಿಸಿತು. ಇಂತಹ ವ್ಯಕ್ತಿಯೋರ್ವರ ದಾಂಪತ್ಯ ಜೀವನವನ್ನು ಮುಂದಿಟ್ಟುಕೊAಡು ರಚಿಸಲಾದ ಕಲಾಕೃತಿ ‘ಮುದ್ದಣನ ಮನೋರಮೆ’. ಇದು ಧರ್ಮಸ್ಥಳದ ಹೇಮಾವತಿ ವೀ.ಹೆಗ್ಗಡೆಯವರ ನಿಡುಗಾಲದ ಯೋಜನೆ. ಇಂತಹದ್ದೊಂದು ಕೃತಿಯ ಕನಸು ಅವರ ತಲೆಹೊಕ್ಕ 2ವರ್ಷದ ಬಳಿಕ ಉಜಿರೆಯ ವನರಂಗ ಬಯಲು ರಂಗಭೂಮಿಯಲ್ಲಿ ನನಸಾಗಿ ನಾಟಕವು ದೃಶ್ಯ ರೂಪಕವಾಗಿ ಮೈದಳೆಯಿತು.


ನಾಟಕ ಕ್ಷೇತ್ರದಲ್ಲಿ ಈಗಾಗಲೇ ತಮ್ಮ ಛಾಪು ಮೂಡಿಸಿರುವ ಹೇಮಾವತಿ ಹೆಗ್ಗಡೆಯವರ ಕಲಾತಂಡ ‘ರಂಗಶಿವ’ ಮುದ್ದಣ ನಾಟಕವನ್ನು ಯಶಸ್ವಿಯಾಗಿ ಸಾದರಪಡಿಸಿತು. ರಂಗಶಿವದ ದಶಮಾನೋತ್ಸವ ವರ್ಷದ ‘ಮುದ್ದಣನ ಮನೋರಮೆ’ ನಾಟಕ ಗಂಭೀರ ಮತ್ತು ಆಂತರ್ಯವನ್ನು ಕೆದಕುವ ಪ್ರಯೋಗ. ಎಲ್ಲಿ ಎಡವಟ್ಟಾದರೂ ಕಿರಿಕಿರಿ ಎನಿಸಬಹುದು. ಹೀಗಿದ್ದರೂ ಒಟ್ಟಂದದಲ್ಲಿ ಮುದ್ದಣ ನಾಟಕ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಅವರಿಂದ ಸ್ಪಂದನೆ ಪಡೆಯುವಲ್ಲಿ ಸಫಲವಾಯಿತು. ಹೇಮಾವತಿ ವೀ.ಹೆಗ್ಗಡೆಯವರ ಮಹಿಳಾಪರ ಚಿಂತನೆಗಳು ಮತ್ತೊಮ್ಮೆ ಈ ನಾಟಕದಲ್ಲಿಯೂ ವ್ಯಕ್ತಗೊಂಡವು. ಒಟ್ಟಾರೆಯಾಗಿ ಮುದ್ದಣನ ಕಣ್ಣುಗಳಿಂದ ಕಂಡ ರಾಮಾಶ್ವಮೇಧ ನಾಟಕ, ಹೊಸರಂಗ ಪ್ರಯೋಗದ ಸಾಧ್ಯತೆಗಳನ್ನು ಸಮರ್ಥವಾಗಿ ಸಭಿಕರ ಮುಂದೆ ತಂದು ನಿಲ್ಲಿಸಿದ್ದು ಮಾತ್ರವಲ್ಲದೆ ಪ್ರೇಕ್ಷಕರ ಒಪ್ಪುಗೆಯನ್ನೂ ಪಡೆದುಕೊಂಡಿತು.

Related posts

ಕಳಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರ: ಜಾಗೃತಿ ಕಾರ್ಯಕ್ರಮ

Suddi Udaya

ಜು.14-19: ಬೆಳ್ತಂಗಡಿ ಪ್ರಭು ಜ್ಯುವೆಲ್ಸ್ ನಲ್ಲಿ ವಿಶೇಷ ಮನ್ಸೂನ್ ಮಾರಾಟ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya
error: Content is protected !!