23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ರಾತ್ರಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಆಗಮಿಸಿದರು. ವೇದಿಕೆಯಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ , ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ್ಯ ಗೌಡ ಪದಳ, ಕಾರ್ಯದರ್ಶಿ ಆನಂದ ಗೌಡ ಕಲ್ಕುಡಂಗೆ, ಸೇವಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಅಪ್ರೋಡಿ, ಕಾರ್ಯದರ್ಶಿ ಶರತ್ಚಂದ್ರ ಹಿರ್ತಡ್ಕ ಉಪಸ್ಥಿತರಿದ್ದರು.

ಈ ವೇಳೆ ಧರ್ಮಸ್ಥಳ ಕಲ್ಲೇರಿ ಶ್ರೀ ಸಿದ್ಧಿವಿನಾಯಕ ಸ್ಟೋರ್ ಉದ್ಯಮಿಗಳಾದ ರತ್ನಾಕರ ಪ್ರಭು, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ನರೇಂದ್ರ ಕುಮಾರ್ ಉಜಿರೆ ಸನ್ಮಾನಿಸಲಾಯಿತು. ಹಾಗೂ ತಾಳಮದ್ದಳೆಯ ಹಿರಿಯ ಅರ್ಥಧಾರಿ ಮತ್ತು ಕೃಷಿಕರಾದ ಸೂರ್ಯನಾರಾಯಣ ಶರ್ಮ ಎಲಿಕಳ ರವರಿಗೆ ಯಕ್ಷ ಭಾರತಿ ದಶಕ ಸಂಭ್ರಮದ ಸೇವಾ ಗೌರವ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ , ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕು| ಭವ್ಯ ಕಾಯಿಲ ಪ್ರಾರ್ಥಿಸಿದರು. ಸುಧಾಶ್ರೀ ಕೆಮನೋಡಿ ಸ್ವಾಗತಿಸಿ, ರುಕ್ಮಯ್ಯ ನೆಕ್ಕಿಲು ಧನ್ಯವಾದವಿತ್ತರು. ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.

ರಾತ್ರಿ ಪ್ರಸಿದ್ಧ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ನಡೆಯಿತು..

ಚಿತ್ರ : ರಾಜೇಶ್ ಪಟ್ರಮೆ

Related posts

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya
error: Content is protected !!