March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

ಅಳದಂಗಡಿ ವಲಯದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಡಗಕಾರಂದೂರು ‘ಎ’ ಒಕ್ಕೂಟದ ಕೊಳಕ್ಕೆ , ಪೂರ್ಣೇಶ್ವರಿ, ಮಹಿಷಾ ಮರ್ದಿನಿ, ವಿನಾಯಕ, ನಾಲ್ಕು ಸಂಘಗಳು ಸೇರಿ ಕಳೆದ 22 ವರ್ಷದಿಂದ ಮಕರ ಸಂಕ್ರಾಂತಿಯ ದಿವಸ ವಾರ್ಷಿಕ ಭಜನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು, ಅದರಂತೆ ಜ.14ರಂದು ಭಜನಾ ಕಾರ್ಯಕ್ರಮವು ಶಾಂತಪ್ಪ ಪೂಜಾರಿ ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಂತಪ್ಪ ಪೂಜಾರಿ ವಹಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಪೂಜಾರಿ ಉಂಗಿಲಬೈಲು, ನಾರಾಯಣ ಪದ್ಮುಂಜ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ, ಸೋಮನಾಥೇಶ್ವರಿ ಭಜನಾ ಮಂಡಳಿಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಯೋಗೇಶ್ ಪೂಜಾರಿ ಕುರ್ದೊಟ್ಟು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಕೊಳಕ್ಕೆ ಪ್ರಗತಿ ಬಂದು ಸಂಘದ ಹಿರಿಯ ಸದಸ್ಯರಾದ ಶಾಂತಿ ರಾಜ್ ಗುಡಿಗರ್ ಸ್ವಾಗತಿಸಿ, ಸದಾನಂದ ಪೂಜಾರಿ ಕೊಳಕ್ಕೆ ಧನ್ಯವಾದವಿತ್ತರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
error: Content is protected !!