July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya
error: Content is protected !!