23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿ ಸೋಲನ್ನು ಕಂಡಿದ್ದಾರೆ.

ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಸಾಮಾನ್ಯ ಕ್ಷೇತ್ರದಿಂದ ಕೆ. ರಮೇಶ್ ರಾವ್ (497), ಧನಂಜಯ ಗೌಡ ಕಳೆಂಜ (559), ವಿಜಯ ಕುಮಾರ್ ಹೆಚ್. (583), ಜಯರಾಮ ಪಾಳಂದೆ ಎಸ್. (435), ಆನಂದ ಗೌಡ ಎಂ (501), ಕೆ. ಹೇಮಂತ್ ಗೌಡ (463), ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಮೋಹನ ಪೂಜಾರಿ ಬಿ. (494), ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಧನಂಜಯ ಬಂಡೇರಿ (507), ಮಹಿಳಾ ಕ್ಷೇತ್ರದಿಂದ ಗಾಯತ್ರಿ ಹೆಚ್. ಗೌಡ (524), ವಿಜಯಲಕ್ಷ್ಮೀ ಕೆ. (485 ), ಪ.ಜಾತಿ ಕ್ಷೇತ್ರದಿಂದ ರಾಜು (506), ಪ. ಪಂಗಡ ಕ್ಷೇತ್ರದಿಂದ ಡೀಕಯ್ಯ ಎಂ.ಕೆ. (575) ಜಯಭೇರಿ ಭಾರಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತರಾದ ಅಶೋಕ್ ಭಟ್ (348) ಗಣೇಶ್ ಗೌಡ (315), ಮಾಧವ ಗೌಡ (280), ವೀರೇಂದ್ರ ಕುಮಾರ್ (280), ಶ್ಯಾಮ್ ಪ್ರಕಾಶ್ ಭಟ್ (260), ಸೆಬಾಸ್ಟಿನ್ ಪಿ.ಟಿ (339), ಐಶ್ವರ್ಯ ಜೆ. ಶೆಟ್ಟಿ (333), ಪ್ರೇಮ (284), ಸೋಮಪ್ಪ ಪೂಜಾರಿ (280), ವಾಸಪ್ಪ ಗೌಡ (281), ಶ್ರೀಧರ ಎಸ್.(292) ಆನಂದ ಮಲೆಕುಡಿಯ (203) ಮತ ಪಡೆದು ಸೋಲು ಅನುಭವಿಸಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಕಾರ್ಯನಿರ್ವಹಿಸಿದರು. ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya
error: Content is protected !!