July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಬಳಂಜ ಉನ್ನತೀಕರಿಸಿದ ಪ್ರಾಥಮಿಕ,ಪ್ರೌಢಶಾಲೆ ಅಮೃಮಹೋತ್ಸವ ಸಂಭ್ರಮದಲ್ಲಿದ್ದು ಈ ಪ್ರಯುಕ್ತ ಬಳಂಜ ಶಿಕ್ಷಣ ಟ್ರಸ್ಟ್ ರಿ, ಅಮೃತ ಮಹೋತ್ಸವ ,ಹಳೆವಿದ್ಯಾರ್ಥಿ ಸಂಘ, ಶಾಲಾಬಿವೃದ್ದಿ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲ ಮತ್ತು ವಿವಿಧ ಸಂಘಸಂಸ್ಥೆಗಳು ಹಲವಾರು ಅಬಿವೃದ್ದಿ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇದಕ್ಕೆ ಪ್ರೋತ್ಸಾಹವಾಗಿ ಶ್ರಿಮಾತಾ ನಾಲ್ಕೂರು ತಂಡವು ರೂ ಹತ್ತು ಸಾವಿರದ ನೆರವನ್ನು ಬುಧವಾರ ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜರವರಿಗೆ ಹಸ್ತಾಂತರಿಸಿದರು.

ಇತ್ತಿಚೆಗೆ ಖ್ಯಾತ ಕಂಬಳ ಓಟಗಾರ ದಿ.ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ಶ್ರಿಮಾತ ನಾಲ್ಕೂರು ತಂಡವು ನಡೆಸಿದ ಹೊನಲು ಬೆಳಕಿನ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನಡೆಸಿ ಉಳಿಕೆ ಹಣವನ್ನು ಶಿಕ್ಷಣ ನೆರವಿಗೆ ನೀಡಿದರು.

ಈ ಸಂದರ್ಭದಲ್ಲಿ ಶ್ರಿಮಾತ ನಾಲ್ಕೂರು ತಂಡದ ಸನತ್ ಶೆಟ್ಟಿ, ಹರೀಶ್ ಮಜ್ಜೇನಿ,ಪುರಂದರ ಪುಜಾರಿ ಪೇರಾಜೆ, ನಿಶಾಂತ್ ಹುಂಬೆಜೆ, ಆದರ್ಶ್ ಯೈಕುರಿ,ರಚನ್ ಮಜಲೋಡಿ, ಸತೀಶ್ ದೇವಾಡಿಗ,ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್,ಬಳಂಜ ಗ್ರಾ.ಪಂ ಸದಸ್ಯ ರವೀಂದ್ರ ಬಿ ಅಮಿನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಹಾಗೂ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya
error: Content is protected !!