23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಬಳಂಜ ಉನ್ನತೀಕರಿಸಿದ ಪ್ರಾಥಮಿಕ,ಪ್ರೌಢಶಾಲೆ ಅಮೃಮಹೋತ್ಸವ ಸಂಭ್ರಮದಲ್ಲಿದ್ದು ಈ ಪ್ರಯುಕ್ತ ಬಳಂಜ ಶಿಕ್ಷಣ ಟ್ರಸ್ಟ್ ರಿ, ಅಮೃತ ಮಹೋತ್ಸವ ,ಹಳೆವಿದ್ಯಾರ್ಥಿ ಸಂಘ, ಶಾಲಾಬಿವೃದ್ದಿ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲ ಮತ್ತು ವಿವಿಧ ಸಂಘಸಂಸ್ಥೆಗಳು ಹಲವಾರು ಅಬಿವೃದ್ದಿ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇದಕ್ಕೆ ಪ್ರೋತ್ಸಾಹವಾಗಿ ಶ್ರಿಮಾತಾ ನಾಲ್ಕೂರು ತಂಡವು ರೂ ಹತ್ತು ಸಾವಿರದ ನೆರವನ್ನು ಬುಧವಾರ ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜರವರಿಗೆ ಹಸ್ತಾಂತರಿಸಿದರು.

ಇತ್ತಿಚೆಗೆ ಖ್ಯಾತ ಕಂಬಳ ಓಟಗಾರ ದಿ.ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ಶ್ರಿಮಾತ ನಾಲ್ಕೂರು ತಂಡವು ನಡೆಸಿದ ಹೊನಲು ಬೆಳಕಿನ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನಡೆಸಿ ಉಳಿಕೆ ಹಣವನ್ನು ಶಿಕ್ಷಣ ನೆರವಿಗೆ ನೀಡಿದರು.

ಈ ಸಂದರ್ಭದಲ್ಲಿ ಶ್ರಿಮಾತ ನಾಲ್ಕೂರು ತಂಡದ ಸನತ್ ಶೆಟ್ಟಿ, ಹರೀಶ್ ಮಜ್ಜೇನಿ,ಪುರಂದರ ಪುಜಾರಿ ಪೇರಾಜೆ, ನಿಶಾಂತ್ ಹುಂಬೆಜೆ, ಆದರ್ಶ್ ಯೈಕುರಿ,ರಚನ್ ಮಜಲೋಡಿ, ಸತೀಶ್ ದೇವಾಡಿಗ,ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್,ಬಳಂಜ ಗ್ರಾ.ಪಂ ಸದಸ್ಯ ರವೀಂದ್ರ ಬಿ ಅಮಿನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಹಾಗೂ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya
error: Content is protected !!