September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ರಾತ್ರಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಆಗಮಿಸಿದರು. ವೇದಿಕೆಯಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ , ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ್ಯ ಗೌಡ ಪದಳ, ಕಾರ್ಯದರ್ಶಿ ಆನಂದ ಗೌಡ ಕಲ್ಕುಡಂಗೆ, ಸೇವಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಅಪ್ರೋಡಿ, ಕಾರ್ಯದರ್ಶಿ ಶರತ್ಚಂದ್ರ ಹಿರ್ತಡ್ಕ ಉಪಸ್ಥಿತರಿದ್ದರು.

ಈ ವೇಳೆ ಧರ್ಮಸ್ಥಳ ಕಲ್ಲೇರಿ ಶ್ರೀ ಸಿದ್ಧಿವಿನಾಯಕ ಸ್ಟೋರ್ ಉದ್ಯಮಿಗಳಾದ ರತ್ನಾಕರ ಪ್ರಭು, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ನರೇಂದ್ರ ಕುಮಾರ್ ಉಜಿರೆ ಸನ್ಮಾನಿಸಲಾಯಿತು. ಹಾಗೂ ತಾಳಮದ್ದಳೆಯ ಹಿರಿಯ ಅರ್ಥಧಾರಿ ಮತ್ತು ಕೃಷಿಕರಾದ ಸೂರ್ಯನಾರಾಯಣ ಶರ್ಮ ಎಲಿಕಳ ರವರಿಗೆ ಯಕ್ಷ ಭಾರತಿ ದಶಕ ಸಂಭ್ರಮದ ಸೇವಾ ಗೌರವ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ , ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಕು| ಭವ್ಯ ಕಾಯಿಲ ಪ್ರಾರ್ಥಿಸಿದರು. ಸುಧಾಶ್ರೀ ಕೆಮನೋಡಿ ಸ್ವಾಗತಿಸಿ, ರುಕ್ಮಯ್ಯ ನೆಕ್ಕಿಲು ಧನ್ಯವಾದವಿತ್ತರು. ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರೂಪಿಸಿದರು.

ರಾತ್ರಿ ಪ್ರಸಿದ್ಧ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ನಡೆಯಿತು..

ಚಿತ್ರ : ರಾಜೇಶ್ ಪಟ್ರಮೆ

Related posts

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!