April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

ಅಳದಂಗಡಿ ವಲಯದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಡಗಕಾರಂದೂರು ‘ಎ’ ಒಕ್ಕೂಟದ ಕೊಳಕ್ಕೆ , ಪೂರ್ಣೇಶ್ವರಿ, ಮಹಿಷಾ ಮರ್ದಿನಿ, ವಿನಾಯಕ, ನಾಲ್ಕು ಸಂಘಗಳು ಸೇರಿ ಕಳೆದ 22 ವರ್ಷದಿಂದ ಮಕರ ಸಂಕ್ರಾಂತಿಯ ದಿವಸ ವಾರ್ಷಿಕ ಭಜನ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದು, ಅದರಂತೆ ಜ.14ರಂದು ಭಜನಾ ಕಾರ್ಯಕ್ರಮವು ಶಾಂತಪ್ಪ ಪೂಜಾರಿ ಅವರ ಮನೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಂತಪ್ಪ ಪೂಜಾರಿ ವಹಿಸಿದರು. ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಸದಾನಂದ ಪೂಜಾರಿ ಉಂಗಿಲಬೈಲು, ನಾರಾಯಣ ಪದ್ಮುಂಜ, ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಶಾಲಿನಿ, ಸೋಮನಾಥೇಶ್ವರಿ ಭಜನಾ ಮಂಡಳಿಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಯೋಗೇಶ್ ಪೂಜಾರಿ ಕುರ್ದೊಟ್ಟು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು. ಕೊಳಕ್ಕೆ ಪ್ರಗತಿ ಬಂದು ಸಂಘದ ಹಿರಿಯ ಸದಸ್ಯರಾದ ಶಾಂತಿ ರಾಜ್ ಗುಡಿಗರ್ ಸ್ವಾಗತಿಸಿ, ಸದಾನಂದ ಪೂಜಾರಿ ಕೊಳಕ್ಕೆ ಧನ್ಯವಾದವಿತ್ತರು.

Related posts

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ