23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

ಕಡಿರುದ್ಯಾವರ: ಶ್ರೀ ರಾಮಾಂಜನೇಯ ದೇವಸ್ಥಾನ ಕಾನರ್ಪದಲ್ಲಿ 49ನೇ ವರ್ಷದ ಮಕರ ಸಂಕ್ರಮಣದ ಶ್ರೀ ರಾಮಾಂಜನೇಯ ದೇವರ ಪೂಜೆ, ಸತ್ಯನಾರಾಯಣ ಪೂಜೆ ಹಾಗೂ ದಿI ಎಂ. ಸಂಜೀವ ಮಾಸ್ಟರ್ ಕುರುಡ್ಯ ಸಂಸ್ಮರಣೆಯಲ್ಲಿ ಭಜನಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮವು ಜ.14ರಂದು ವಿಕ್ರಮ ಹೊಳ್ಳ ನೇತೃತ್ವದಲ್ಲಿ ನಡೆಯಿತು.


ಭಜನಾ ಕಾರ್ಯಕ್ರಮವನ್ನು ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಸ್. ವರ್ಮ ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾIಅಕ್ಷತಾ ಕೆ. ಧಾರ್ಮಿಕ ಪ್ರವರ್ಚನ ನೀಡಿದರು.


ವೇದಿಕೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಚಿರಂಜೀವಿ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ, ದಿವ್ಯಾ ರಾಮಚಂದ್ರ ಭಟ್ ಅರೆಕ್ಕಲ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಎಕ್ಷೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬಂಗಾಡಿ ಸಿ.ಎ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಕುಮಾರ್ ನಾವೂರು, ಉಪಾಧ್ಯಕ್ಷ ಆನಂದ ಗೌಡ ಬರೆಮೇಲು, ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ, ಶಾರದನಗರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕೊಕ್ಕಡ ಸ್ವಾಮಿ ಪ್ರಸಾದ್ ಕನ್ಷ್ಟ್ರಕ್ಷನ್ ನ ಮಾಲಕರಾದ ನಾಗೇಶ್ ಗೌಡ ಕೊಕ್ಕಡ, ನಾರಾಯಣ ಗೌಡ ಪಂಚಶ್ರೀ ಮುಂಡಾಜೆ, ರಾಮಣ್ಣ ಶೆಟ್ಟಿ ಅಗರಿ, ಲೋಕೇಶ್ವರಿ ವಿನಯಚಂದ್ರ ಗೌಡ ವಳಂಬ್ರ, ಬಾಬು ಪೂಜಾರಿ ಕೂಳೂರು, ಚೆನ್ನಕೇಶವ ನಾಯ್ಕ ಮುಂಡಾಜೆ, ಅರಣ್ಯ ಉಪವಲಯಾಧಿಕಾರಿ ಹರಿಪ್ರಸಾದ್ ಕಾನರ್ಪ, ಕಲಾವಿದ ಜಯರಾಮ್ ಕಲಾಕುಂಚ ಮುಂಡಾಜೆ ಹಾಗೂ ಕಡಿರುದ್ಯಾವರ ಮತ್ತು ಮುಂಡಾಜೆ ಗ್ರಾಮದ ಹೆಚ್ಚಿನ ಭಕ್ತರು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಶ್ರೀ ರಾಮಾಂಜನೇಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಿಶೋರ್ ಕುಮಾರ್ ಸ್ವಾಗತಿಸಿ, ನಾರಾಯಣ ಪೂಜಾರಿ ದೂಂಬೆಟ್ಟು ಧನ್ಯವಾದವಿತ್ತರು.

Related posts

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya
error: Content is protected !!