23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!