22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!