30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ: ಬಳಂಜ ಉನ್ನತೀಕರಿಸಿದ ಪ್ರಾಥಮಿಕ,ಪ್ರೌಢಶಾಲೆ ಅಮೃಮಹೋತ್ಸವ ಸಂಭ್ರಮದಲ್ಲಿದ್ದು ಈ ಪ್ರಯುಕ್ತ ಬಳಂಜ ಶಿಕ್ಷಣ ಟ್ರಸ್ಟ್ ರಿ, ಅಮೃತ ಮಹೋತ್ಸವ ,ಹಳೆವಿದ್ಯಾರ್ಥಿ ಸಂಘ, ಶಾಲಾಬಿವೃದ್ದಿ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲ ಮತ್ತು ವಿವಿಧ ಸಂಘಸಂಸ್ಥೆಗಳು ಹಲವಾರು ಅಬಿವೃದ್ದಿ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇದಕ್ಕೆ ಪ್ರೋತ್ಸಾಹವಾಗಿ ಶ್ರಿಮಾತಾ ನಾಲ್ಕೂರು ತಂಡವು ರೂ ಹತ್ತು ಸಾವಿರದ ನೆರವನ್ನು ಬುಧವಾರ ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಮನೋಹರ್ ಬಳಂಜರವರಿಗೆ ಹಸ್ತಾಂತರಿಸಿದರು.

ಇತ್ತಿಚೆಗೆ ಖ್ಯಾತ ಕಂಬಳ ಓಟಗಾರ ದಿ.ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ಶ್ರಿಮಾತ ನಾಲ್ಕೂರು ತಂಡವು ನಡೆಸಿದ ಹೊನಲು ಬೆಳಕಿನ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನಡೆಸಿ ಉಳಿಕೆ ಹಣವನ್ನು ಶಿಕ್ಷಣ ನೆರವಿಗೆ ನೀಡಿದರು.

ಈ ಸಂದರ್ಭದಲ್ಲಿ ಶ್ರಿಮಾತ ನಾಲ್ಕೂರು ತಂಡದ ಸನತ್ ಶೆಟ್ಟಿ, ಹರೀಶ್ ಮಜ್ಜೇನಿ,ಪುರಂದರ ಪುಜಾರಿ ಪೇರಾಜೆ, ನಿಶಾಂತ್ ಹುಂಬೆಜೆ, ಆದರ್ಶ್ ಯೈಕುರಿ,ರಚನ್ ಮಜಲೋಡಿ, ಸತೀಶ್ ದೇವಾಡಿಗ,ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಪೇರಂದಬೈಲ್,ಬಳಂಜ ಗ್ರಾ.ಪಂ ಸದಸ್ಯ ರವೀಂದ್ರ ಬಿ ಅಮಿನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಹಾಗೂ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya
error: Content is protected !!