July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya
error: Content is protected !!