September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!