23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.

ಜ.13 ರಂದು ರಾತ್ರಿ ಕೊಕ್ರಾಡಿ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನ ಅದರ ಸವಾರ ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸಹ ಸವಾರ ಲೋಹಿತ್‌ ರವರ ಕಾಲಿಗೆ ಹಾಗೂ ಸವಾರ ತಿಲಕೇಶ ರವರ ಕೈ ಕಾಲಿಗೆ ತರಚಿದ ಹಾಗೂ ಗುದ್ದಿದ ಗಾಯಗಳಾಗಿದ್ದು ಅಪಘಾತದಿಂದ ಉಂಟಾದ ನೋವು ಉಲ್ಬಣಿಸಿರುವುದರಿಂದ ಗಾಯಾಳುಗಳು ಉಜಿರೆ ಬೆನಕ ಆಸ್ಪತ್ರೆಗೆ ಹೋದ ಸಮಯ ಸಹ ಸವಾರ ಲೋಹಿತ್‌ ರವರ ಕಾಲಿನ ಎಕ್ಸರೇ ತೆಗೆದು ನೋಡಲಾಗಿ ಮೂಳೆ ಮುರಿತದ ಗಾಯಗಳಾಗಿ ಚಿಕಿತ್ಸೆಗೆ ದಾಖಲಾಗಿದ್ದು, ಸವಾರ ತಿಲಕೇಶ ಹೋರ ರೋಗಿಯಾಗಿ ಚಿಕಿತ್ಸೆ ಪಡೆದಿದ್ದು ಈ ಬಗ್ಗೆ ಪ್ರಥಮವಾಗಿ ಸವಾರರಿಬ್ಬರು ಅಣ್ಣ-ತಮ್ಮಂದಿರಾಗಿದ್ದರಿಂದ ದೂರು ನೀಡದೇ ಇದ್ದು ಈಗ ಸಹ ಸವಾರ ಲೋಹಿತ್‌ ರವರಿಗೆ ಉಂಟಾದ ಗಾಯ ತೀವ್ರಸ್ವರೂಪದ್ದಾಗಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡಿರುತ್ತಾರೆ.

Related posts

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya
error: Content is protected !!