23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಜ.31ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ ನಡೆಯಲಿದೆ.


ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ಕರಿಮಣಿ ಹಾಗೂ ಬಳೆಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ. 2ಗ್ರಾಂ ನಿಂದ ೧೦೦ಗ್ರಾಂ ವರೆಗಿನ ಕರಿಮಣಿ ಸರಗಳು ಲಭ್ಯವಿದೆ. ಸಾವಿರಕ್ಕೂ ಅಧಿಕ ವಿನ್ಯಾಸದ ಮಾಂಗಲ್ಯ ಸರದ ಸಂಗ್ರಹವಿದೆ. ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು ಮುಳಿಯದ ವಿಶೇಷತೆಯಾಗಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ೫೦ಕ್ಕೂ ಅಧಿಕ ಹೊಸ ವಿನ್ಯಾಸದ ಬಳೆಗಳ ಸಂಗ್ರವಿದೆ.

ದಿನನಿತ್ಯ ಬಳಕೆಯ ಮತ್ತು ಅಪರೂಪದ ವಿನ್ಯಾಸಗಳ ಬಳೆಗಳ ಪ್ರದರ್ಶನ ಉತ್ಸವದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಚಿನ್ನಾಭರಣದ ಮಳಿಗೆ ಜನರು ಬಂದುಹೋಗುವುದಕ್ಕೆ ಹಿಂಜರಿಯುತ್ತಿದ್ದ ಸಂದರ್ಭದಲ್ಲಿ ಪ್ರದರ್ಶನ ಮತ್ತು ಮಾರಾಟ ಕಲ್ಪನೆಯನ್ನು ಪರಿಚಯಿಸಿದ ಮುಳಿಯ 25 ವರ್ಷಗಳ ಹಿಂದೆ ವಿವಿಧ ರೀತಿಯ ಉತ್ಸವಗಳನ್ನು ಪ್ರಾರಂಭಿಸಿದೆ.

ವಿವಿಧ ಬಗೆಯ ಕಂಠಿ: ಮುಷ್ಟಿ ಕಂಠಿ, ಮುಷ್ಟಿ ಪಿರಿ ಕಂಠಿ, ಗಾಂಚು ಕಂಠಿ, ಗಾಂಚು ಪಿರಿ ಕಂಠಿ, ಕೆ. ಕೆ. ಜಿ. ಸಿ. ಕಂಠಿ, ಕಟ್ಸ್ ಕಂಠಿ, ಕಟ್ಸ್ ಕವರ್ ಕಂಠಿ, ಬಾಂಬೆ ಕಂಠಿ, ಜಿ.ಜಿ. ಕಂಠಿ, ಮುಷ್ಟಿ ಕವರ್ ಕಂಠಿ, ನುಗ್ಗೆ ಕಂಠಿ, ನುಗ್ಗೆ ಪಿರಿ ಕಂಠಿ, ನುಗ್ಗೆ ಕವರ್ ಕಂಠಿ, ಕಟ್ಸ್ ಕವರ್ ಕಂಠಿ, ಕಟ್ಸ್ ಗೋಲು ಕಂಠಿ, ಜೋಮಾಲೆ ಕಂಠಿ, ತ್ರಿರಿಂಗ್ ಕಂಠಿ, ದಳಪತಿ ಕಂಠಿ, ದಳ ಕವರ್ ಕಂಠಿ, ಎಂ.ಸಿ.ಬಿ. ಕಂಠಿ, ಧ್ರುವಂ ಕಂಠಿ, ಫ್ಯಾನ್ಸಿ ಕಂಠಿ, ಪವಿತ್ರ ಕಂಠಿ, ಗೋಲು ಕಂಠಿ, ಚಕ್ರ ಕಂಠಿ, ಚಕ್ರ ಕವರ್ ಕಂಠಿ, ತ್ರಿರಿಂಗ್ ಕ್ಯಾಪ್ ಕಂಠಿ, ಟ್ಯೂಬ್ ಕಂಠಿ, ಫ್ಲಾಟ್ ಕಂಠಿ, ಮುಷ್ಟಿ ಗೋಧಿ ಕಂಠಿ, ಝಿರೋ ಬೀಡ್ಸ್ ಕರಿಮಣಿ, ಶಾರ್ಟ್ ಕರಿಮಣಿ ಸೇರಿ ವಿವಿಧ ಬಗೆಯ ಕಂಠಿಗಳು ಸಂಗ್ರಹದಲ್ಲಿದೆ.

Related posts

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
error: Content is protected !!