24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!