March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya
error: Content is protected !!