23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!