23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!