ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya
error: Content is protected !!