July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!