ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಫಂಡಿಜೆ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಜೀವನದ ಶೈಲಿಯನ್ನು ಬದಲಿಸುದರೊಂದಿಗೆ ಅವರಿಲ್ಲಿನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ” ಎಂದು ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ಕೆ ಪಾಣೂರು ಹೇಳಿದರು.

ಅವರು ದ ಕ ಜಿ ಪ ಹಿ ಪ್ರಾ ಶಾಲೆ ಫoಡಿಜೆವಾಳ್ಯ ಇಲ್ಲಿ ನಡೆಯುತ್ತಿರುವ ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೋ “ಎನ್ ಎಸ್ ಎಸ್ ವಿದ್ಯಾರ್ಥಿಗಳು ಶಿಬಿರದಲ್ಲಿ ಕಳೆಯುವ ಅಷ್ಟೂ ಸಮಯವು ಅವರ ವ್ಯಕ್ತಿತ್ವ ಹಾಗೂ ದೇಶದ ಸೇವೆ ಮಾಡುವಲ್ಲಿ ಸಹಕಾರಿಯಾಗಲಿ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ ಇಲ್ಲಿಯ ಗೌರವಾಧ್ಯಕ್ಷ ಅಮ್ಮಾಜಿ ಕೆ ಹಿರ್ತೊಟ್ಟು,ಕುಕ್ಕೇಡಿ ಗ್ರಾಮ ಪಂಚಾಯತಿನ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಕುಕ್ಕೇಡಿ ಗ್ರಾಮ ಪಂಚಾಯತಿನ ಸದಸ್ಯ ದಿನೇಶ್ ಮೂಲ್ಯ, ಜನಾರ್ದನ ಪೂಜಾರಿ , ಶ್ರೀಮತಿ ಗೀತಾ, ಫoಡಿಜೆವಾಳ್ಯ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಭವನೀಶ್ ಫoಡಿಜೆ, ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಸ್ವಾತಿ, ಸಂತ ಅಂತೋನಿ ಪದವಿ ಕಾಲೇಜು ನಾರಾವಿಯ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕು.ಶರಣ್ಯ, ಎನ್ ಎನ್ ಎಸ್ ಕಾರ್ಯದರ್ಶಿಗಳಾದ ವಿವೇಕ್ ಹಾಗೂ ಕು.ರಶ್ವಿತಾ ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ ಬಳಂಜ ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಸಹ ಯೋಜನಾಧಿಕಾರಿ ಅವಿನಾಶ್ ಲೋಬೊ ಧನ್ಯವಾದವಿತ್ತರು. ಸಹಯೋಜನಾಧಿಕಾರಿ ಸಂತೋಷ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಮಾಲಾಡಿಯಲ್ಲಿ ಮಲ್ಲಿಗೆ ಕೃಷಿ, ತರಕಾರಿ ಕೃಷಿ, ಸಾವಯವ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya
error: Content is protected !!