30 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

ಉಜಿರೆ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಇದರ ದಶಮಾನೋತ್ಸವದ ಪ್ರಯುಕ್ತ ಶ್ರೀಮಾತಾ ಆರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ನಾಗರಾಜ ಕಾಂಪೌಂಡ್ ಆವರಣದಲ್ಲಿ ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀದೇವಿ ಮಹಾತ್ಮೆ ಬಯಲಾಟ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ವಹಿಸಿದ್ದರು. ಅತಿಥಿಗಳಾಗಿ ಪದ್ಮಶೇಖರ ಜೈನ್ ಕಾವಳಕಟ್ಟೆ, ಭಾಗವತ ಪಟ್ಲ ಸತೀಶ್ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಉಜಿರೆ ಲಕ್ಷ್ಮಿ ಗ್ರೂಪ್ಸ್ ಮೋಹನ ಕುಮಾರ್, ಉಜಿರೆ ಶ್ರೀ ದುರ್ಗಾ ಇಂಡಸ್ಟ್ರೀಸ್ ರಮೇಶ್ ಶೆಟ್ಟಿ ಭಾಗವಹಿಸಿದ್ದರು.

ಪಾವಂಜೆ ಮೇಳದ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಶುಭಹಾರೈಸಿದರು.ಜಯಶಂಕರ ದಾಸ್ ಕಾವಳಕಟ್ಟೆ, ಶ್ರೀಮಾತಾ ಅರ್ಟ್ಸ್ ಗುರುಪ್ರಸಾದ್, ಚೇತನಾ ಅತಿಥಿಗಳನ್ನು ಶಾಲು, ಸ್ಮರಣಿಕೆ ನೀಡಿ ಗೌರವಿಸಿದರು.

ಯಕ್ಷ ಭಾರತಿ ಟ್ರಸ್ಟಿಗಳಾದ ಮುರಳಿಧರ ದಾಸ್, ಮಹೇಶ ಕನ್ಯಾಡಿ,ಶಿತಿಕಂಠ ಭಟ್ ಉಜಿರೆ, ಕುಸುಮಾಕರ ಕುತ್ತೋಡಿ, ಹರೀಶ ಕೊಳ್ತಿಗೆ, ವಿದ್ಯಾ ಕುಮಾರ್ ಕಾಂಚೋಡು, ಕೌಶಿಕ್ ರಾವ್ ಕನ್ಯಾಡಿ ಮತ್ತು ಕೌಸ್ತುಭ ಉಪಸ್ಥಿತರಿದ್ದರು . ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು. ಕೃಷ್ಣಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!