23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya
error: Content is protected !!