July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya
error: Content is protected !!