30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

ಉಜಿರೆ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಇದರ ದಶಮಾನೋತ್ಸವದ ಪ್ರಯುಕ್ತ ಶ್ರೀಮಾತಾ ಆರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ನಾಗರಾಜ ಕಾಂಪೌಂಡ್ ಆವರಣದಲ್ಲಿ ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀದೇವಿ ಮಹಾತ್ಮೆ ಬಯಲಾಟ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ವಹಿಸಿದ್ದರು. ಅತಿಥಿಗಳಾಗಿ ಪದ್ಮಶೇಖರ ಜೈನ್ ಕಾವಳಕಟ್ಟೆ, ಭಾಗವತ ಪಟ್ಲ ಸತೀಶ್ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಉಜಿರೆ ಲಕ್ಷ್ಮಿ ಗ್ರೂಪ್ಸ್ ಮೋಹನ ಕುಮಾರ್, ಉಜಿರೆ ಶ್ರೀ ದುರ್ಗಾ ಇಂಡಸ್ಟ್ರೀಸ್ ರಮೇಶ್ ಶೆಟ್ಟಿ ಭಾಗವಹಿಸಿದ್ದರು.

ಪಾವಂಜೆ ಮೇಳದ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಶುಭಹಾರೈಸಿದರು.ಜಯಶಂಕರ ದಾಸ್ ಕಾವಳಕಟ್ಟೆ, ಶ್ರೀಮಾತಾ ಅರ್ಟ್ಸ್ ಗುರುಪ್ರಸಾದ್, ಚೇತನಾ ಅತಿಥಿಗಳನ್ನು ಶಾಲು, ಸ್ಮರಣಿಕೆ ನೀಡಿ ಗೌರವಿಸಿದರು.

ಯಕ್ಷ ಭಾರತಿ ಟ್ರಸ್ಟಿಗಳಾದ ಮುರಳಿಧರ ದಾಸ್, ಮಹೇಶ ಕನ್ಯಾಡಿ,ಶಿತಿಕಂಠ ಭಟ್ ಉಜಿರೆ, ಕುಸುಮಾಕರ ಕುತ್ತೋಡಿ, ಹರೀಶ ಕೊಳ್ತಿಗೆ, ವಿದ್ಯಾ ಕುಮಾರ್ ಕಾಂಚೋಡು, ಕೌಶಿಕ್ ರಾವ್ ಕನ್ಯಾಡಿ ಮತ್ತು ಕೌಸ್ತುಭ ಉಪಸ್ಥಿತರಿದ್ದರು . ಯಕ್ಷ ಭಾರತಿ ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು. ಕೃಷ್ಣಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಬೆಳ್ತಂಗಡಿ ಹಳೆಕೋಟೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ, ಸಭಾವನದ ಉದ್ಘಾಟನೆಗೆ: ಆದಿಚುಂಚನಗಿರಿ ಸ್ವಾಮೀಜಿಗಳನ್ನು ಆಹ್ವಾನಿಸಿ ಅವರ ದಿವ್ಯಹಸ್ತದಿಂದಲೇ ಕಟ್ಟಡವನ್ನು ಉದ್ಘಾಟಿಸುವಂತೆ – ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮುಖಂಡರ ಆಗ್ರಹ

Suddi Udaya
error: Content is protected !!