37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!