July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

ನಡ: ನೀರು ಸಿಗದ ಬೋರ್‌ವೆಲ್‌ಗಳನ್ನು (ಕೊಳವೆ ಬಾವಿ) ಮುಚ್ಚಾದೇ ಹಾಗೆಯೇ ಬಿಟ್ಟು ರಾಜ್ಯದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳನ್ನು ಆಗಾಗ ಕೇಳುತ್ತಿರುತ್ತೇವೆ. ಇದಕ್ಕೆ ಕಾರಣ ಬೋರ್‌ವೆಲ್ ಕೊರೆದ ನಂತರ ನೀರು ಸಿಗದಿದ್ದಾಗ ಮಾಲಕರು ಇದರ ಗುಂಡಿ ಮುಚ್ಚದೇ ನಿರ್ಲಕ್ಷ್ಯ ವಹಿಸುತ್ತಿರುವುದೇ ಕಾರಣವಾಗಿದೆ.

ಇದೇ ರೀತಿಯ ಅಪಾಯಕಾರಿ ಕೊಳವೆ ಬಾವಿಯೊಂದು ನಡ ಶಾಲಾ ಬಳಿ ಇತ್ತು. ನಡ ಕಿರಿಯ ಪ್ರಾಥಮಿಕ ಶಾಲೆಯ ಬಳಿ 1 ತಿಂಗಳ ಹಿಂದೆ ಪಂಚಾಯತ್ ವತಿಯಿಂದ ಕೊಳವೆ ಬಾವಿಯನ್ನು ಕೊರೆಯಲಾಗಿತ್ತು. ನೀರು ಸಿಗದೆ ಇದ್ದ ಕಾರಣ ಅದರ ಕೇಸಿಂಗ್ ಪೈಪ್ ಹೊರತೆಗೆದು ಗುಂಡಿಯನ್ನು ಮುಚ್ಚದೆ ಅದರ ಮೇಲೆ ಗೋಣಿಯನ್ನು ಹಾಕಿ ಕೊರೆದ ಕಂಪೆನಿಯವರು ಹಾಗೆ ಬಿಟ್ಟು ಹೋಗಿದ್ದರು. ಕೊರೆದ ಬೋರ್‌ವೆಲ್ ಗುಂಡಿಯನ್ನು ಹಾಗೆಯೇ ಬಿಟ್ಟಿರುವುದು ಕಂಡ ಒಬ್ಬ ಸರಕಾರಿ ನೌಕರ ತಾನೇ ಮುಂದೇ ಬಂದು ಹಾರೆ ಹಿಡಿದು ಗುಂಡಿ ಮುಚ್ಚಿದ ಘಟನೆ ನಡೆದಿದೆ.

ಬೋರ್‌ವೆಲ್ ಕೊರೆದು ಹಾಗೆಯೇ ಬಿಟ್ಟಿದ್ದ ಗುಂಡಿಯನ್ನು ಪಂಚಾಯತ್ ಕಾರ್ಯದರ್ಶಿ ಕಿರಣ್ ರವರು ತಾನೇ ಹಾರೆ ಹಿಡಿದು ಗುಂಡಿ ಮುಚ್ಚಿ, ಸಾರ್ವಜನಿಕರಿಗೆ ಆಗಬಹುದಾಗಿದ್ದ ಅಪಾಯವನ್ನು ತಪ್ಪಿಸಿದ್ದಾರೆ. ಇಂತಹ ಒಬ್ಬ ಸರಕಾರಿ ನೌಕರ ನಮಗೆ ಕಾಣಸಿಗುವುದು ಬಹಳ ಅಪರೂಪ. ಅವರಲ್ಲಿ ಇರುವ ಈ ಗುಣ ಇತರರಿಗೆ ಪ್ರೇರಣೆಯಾಗಲಿ ಎಂದು ಗ್ರಾಮದ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
error: Content is protected !!